ದೆಹಲಿಯಲ್ಲಿ ಹೀನಾಯ ಸೋಲು: ಪಂಜಾಬ್ ಸಿಎಂ ಸಿಟಿನ ಮೇಲೆ ಕೇಜ್ರಿವಾಲ್‌ ಕಣ್ಣು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಎಎಪಿ ಹೀನಾಯ ಸೋಲಿನ ಬಳಿಕ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಪಂಜಾಬ್‌ನಲ್ಲಿ ಸಿಎಂ ಸಿಟಿನ ಮೇಲೆ ಕಣ್ಣಿಟ್ಟಿದ್ದು, ಇಂದು ಆಪ್‌ ಶಾಸಕರನ್ನು ಭೇಟಿಯಾಗಿದ್ದಾರೆ.

ದೆಹಲಿಯಲ್ಲಿ ನಡೆದ ಎಎಪಿ ಸಭೆಯಲ್ಲಿ ಕೇಜ್ರಿವಾಲ್, ಹಿರಿಯ ನಾಯಕ ಮನೀಶ್ ಸಿಸೋಡಿಯಾ ಮತ್ತು ಎಲ್ಲಾ ಪಂಜಾಬ್ ಶಾಸಕರು ಮತ್ತು ಪಕ್ಷದ ಇತರ ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು.

ರಾಷ್ಟ್ರ ರಾಜಧಾನಿಯ ಕಪುರ್ತಲಾ ಹೌಸ್‌ನಲ್ಲಿ ನಡೆದ ಪಂಜಾಬ್ ಶಾಸಕರ ಸಭೆ ಗಮನ ಸೆಳೆದಿತ್ತು. ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬದಲಾಯಿಸಲು ಕೇಜ್ರಿವಾಲ್ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು. ರಾಜೌರಿ ಗಾರ್ಡನ್‌ನಿಂದ ಹೊಸದಾಗಿ ಆಯ್ಕೆಯಾದ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ, ಭಗವಂತ್‌ ಮಾನ್ ಅವರಿಗೆ ‘ಅಸಮರ್ಥ’ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಅವರನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ವೀಡಿಯೊದಲ್ಲಿ ಹೇಳಿಕೊಂಡಿದ್ದಾರೆ.

ಇದೀಗ ದೆಹಲಿ ಚುನಾವಣೆಯಲ್ಲಿ ಸೋತ ನಂತರ, ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಪಂಜಾಬ್ ಶಾಸಕರ ಸಭೆ ಕರೆದಿದ್ದಾರೆ. ಭಗವಂತ್‌ ಮಾನ್ ಅವರನ್ನು ಅಸಮರ್ಥ ಎಂದು ಹಣೆಪಟ್ಟಿ ಕಟ್ಟಿ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ.

ಮಹಿಳೆಯರಿಗೆ 1,000 ರೂ. ನೀಡುವ ಭರವಸೆಯನ್ನು ಅವರು ಈಡೇರಿಸಲು, ಮಾದಕ ದ್ರವ್ಯ ಸೇವನೆಯನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಪಂಜಾಬ್‌ನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದ್ದಾರೆ. ಈಗ, ಅವರು ಎಲ್ಲಾ ವೈಫಲ್ಯವನ್ನು ಭಗವಂತ್ ಮಾನ್ ಅವರ ಮೇಲೆ ಹಾಕಲು ಬಯಸುತ್ತಾರೆ. ಕೇಜ್ರಿವಾಲ್ ಒಳ್ಳೆಯ ವ್ಯಕ್ತಿ. ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಅವರು AAP ಪಂಜಾಬ್ ಶಾಸಕರನ್ನು ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!