ಹೊಸದಿಗಂತ ವರದಿ ಕುಶಾಲನಗರ:
ಇಲ್ಲಿನ ಸಮೀಪದ ಗುಡ್ಡೆಹೊಸೂರಿನಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಗುಡ್ಡೆಹೊಸೂರು-ಹಾರಂಗಿ ರಸ್ತೆಯಲ್ಲಿರುವ ಮಹಮ್ಮದ್ ಪೀರ್ ಎಂಬವರಿಗೆ ಸೇರಿದ ಜಮೀನಿನಲ್ಲಿ ಅಂದಾಜು 3-4 ವರ್ಷ ಪ್ರಾಯದ ಚಿರತೆಯ ಮೃತದೇಹ ಪತ್ತೆಯಾಗಿದೆ.
ಪ್ರಾಣಿಗಳಿಗಾಗಿ ತೋಟದಲ್ಲಿ ಹಾಕಿದ್ದ ಉರುಳಿಗೆ ಸಿಲುಕಿ ಇದು ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.