ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳ ನಿಯೋಗ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಮಂಗಳೂರು: ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ಹಾಗೂ ವಿವಿಧ ಸಹಕಾರಿ ಸಂಘಗಳ ಸದಸ್ಯರನ್ನೊಳಗೊಂಡ ನಿಯೋಗವು ಹೊಸದಿಲ್ಲಿಯಲ್ಲಿ ಕೆಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರನ್ನು ಭೇಟಿ ಮಾಡಿ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಕೆ.ಜಿ.ಗೆ ೩೬೦ ರೂಪಾಯಿಗೆ ನಿಗದಿಪಡಿಸುವಂತೆ ಮನವಿ ಸಲ್ಲಿಸಿತು.
ಕೇಂದ್ರ ಸರಕಾರವು ಈ ಹಿಂದೆ ೨೦೧೭ ರಲ್ಲಿ ಕನಿಷ್ಠ ಆಮದು ಬೆಲೆಯನ್ನು ಕೆ.ಜಿ.ಗೆ ೨೫೧ ರೂಪಾಯಿಗೆ ನಿಗದಿ ಪಡಿಸಿತ್ತು. ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಹೆಚ್. ಎಮ್. ಕೃಷ್ಣಕುಮಾರ್, ಅಡಿಕೆ ಮಹಾಮಂಡಳದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ತುಮ್ಕೋಸ್ ಅಧ್ಯಕ್ಷ ಆರ್.ಎಮ್.ರವಿ, ಕ್ಯಾಂಪ್ಕೊ ನಿರ್ದೇಶಕರು ಮತ್ತು ರಾಜ್ಯ ಸಹಕಾರ ಭಾರತಿಯ ಕಾರ್ಯದರ್ಶಿ ಕೃಷ್ಣಪ್ರಸಾದ ಮಡ್ತಿಲ, ಟಿಎಸ್‌ಎಸ್‌ನ ನಿರ್ದೇಶಕ ಶಶಾಂಕ್‌ಎಸ್. ಹೆಗಡೆ, ಮಂಜಪ್ಪ ಹೊಸಬಾಳೆ, ರಮೇಶ ವೈದ್ಯ ಹಾಗೂ ಮಹಾಮಂಡಳದ ನಿರ್ದೇಶಕ ಶಿವಕುಮಾರ್ ಅವರು ನಿಯೋಗದಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!