ಅಡಿಕೆ ಮೇಲಿನ ಜಿಎಸ್ ಟಿ ಕಡಿತಗೊಳಿಸಲು ಸಚಿವರಿಗೆ ಮನವಿ ಮಾಡಿದ ಅಡಿಕೆ ಬೆಳೆಗಾರರ ಸಹಕಾರಿ ಸಂಘಗಳ ನಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಂಗಳೂರು: ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ ಮತ್ತು ಅಡಿಕೆ ಬೆಳೆಗಾರರ ಕಾರ್ಯಪಡೆಯ ಅಧ್ಯಕ್ಷ ಆರಗ ಜ್ಞಾನೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿಯವರ ನೇತೃತ್ವದಲ್ಲಿ ಅಡಿಕೆ ಬೆಳೆಗಾರರ ಸಹಕಾರಿ ಸಂಘಗಳ ಪ್ರಮುಖರನ್ನೊಳಗೊಂಡ ನಿಯೋಗ ಗುರುವಾರ ಕೇಂದ್ರದ ವಿವಿಧ ಸಚಿವರನ್ನು ಭೇಟಿ ಮಾಡಿತು.
ಭೇಟಿಯ ಸಮಯದಲ್ಲಿ ಅಡಿಕೆ ಕೃಷಿಕರ ಸಮಸ್ಯೆಗಳು ಮತ್ತು ಮಾರುಕಟ್ಟೆ ವಿಷಯಗಳಲ್ಲಿ ಸರಕಾರದ ನೀತಿಗಳಲ್ಲಿ ಆಗಬೇಕಾದ
ಬದಲಾವಣೆಗಳ ಕುರಿತು ಮನವಿ ಸಲ್ಲಿಸಲಾಯಿತು.

ಜಿಎಸ್ಟಿಯನ್ನು ಕಡಿಮೆ ಮಾಡುವಂತೆ ಮನವಿ
ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮರನ್ನು ಭೇಟಿ ಮಾಡಿದ ನಿಯೋಗ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿತು. CIB/FCO 1985 ಪರವಾನಗಿ ಅಡಿಯಲ್ಲಿ ತಯಾರಿಸಲ್ಪಡುವ ಕಾಪರ್ಸಲ್ಫೇಟ್‌ಗಳ ಮೇಲೆ 5 % ಜಿಎಸ್ಟಿ ವಿಧಿಸುವುದು, ರೈತರಿಗೆ ಅನು ಕೂಲವಾಗುವಂತೆ ಕಾರ್ಬನ್ ಫೈಬರ್ ದೋಟಿಯ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡುವುದು ಮತ್ತು ಅಡಿಕೆಯ ಮೇಲಿನ ಜಿಎಸ್ಟಿಯನ್ನು ಕಡಿಮೆ ಮಾಡುವಂತೆ ಮನವಿ ಸಲ್ಲಿಸಲಾಯಿತು.

ನಿಯೋಗವು ಕೇಂದ್ರದ ಕೃಷಿಸಚಿವ ನರೇಂದ್ರ ಸಿಂಗ್ ತೋಮಾರ್‌ರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಅಡಿಕೆಯಲ್ಲಿನ ತೇವಾಂಶದ ಗರಿಷ್ಠಮಿತಿಯನ್ನು 11 %ಗೆ ಹೆಚ್ಚಿಸಿ .FSSAI ಮೂಲಕ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿತು. ಈ ಬಗ್ಗೆ ಕ್ಯಾಂಪ್ಕೊದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಮಾಡಿದ ವಿವರಣೆಯಿಂದ ಸಚಿವರಿಗೆ ಮನವರಿಕೆಯಾಗಿದ್ದು ಅವರಿಂದ ಸಕರಾತ್ಮಕಸ್ಪಂದನೆ ಸಿಕ್ಕಿದೆ. ಈ ಊಖಖಅಐ ಈಗಾಗಲೇ ಅಡಿಕೆಯ ತೇವಾಂಶದ ಗರಿಷ್ಠಮಿತಿಯನ್ನು 7%ಗೆ ನಿಗದಿಪಡಿಸಿ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿತ್ತು. ಇದರಿಂದ ಹೊಸ ಅಡಿಕೆಯ ಪ್ರಾರಂಭದಲ್ಲಿ ಮತ್ತು ಮಳೆಗಾಲ
ದಲ್ಲಿ ಅಡಿಕೆ ಮಾರಾಟಕ್ಕೆ ಸಮಸ್ಯೆಯಾಗುತ್ತಿದೆ ಎಂದು ಮನವಿ ಸಲ್ಲಿಸಲಾಯಿತು.



ಕೇಂದ್ರದ ವಾಣಿಜ್ಯ ಸಚಿವ ಪಿಯೂಷಿ ಗೋಯಲ ರನ್ನು ಭೇಟಿ ಮಾಡಿದ ನಿಯೋಗವು ಅಡಿಕೆಯ ಆಮದಿನಿಂದ ದೇಶೀಯ ಅಡಿಕೆಯ ದರ ಏರಿಳಿತದ ಬಗ್ಗೆ ಚರ್ಚೆ ನಡೆಸಿತು. ಹೆಚ್ಚಾದ ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಸರಿಸಿ ಅಡಿಕೆಯ ಕನಿಷ್ಠ ಆಮದು ದರವನ್ನು ಚಾಲಿ ಅಡಿಕೆಗೆ ಕೆ.ಜಿ.ಗೆ 360 ರೂ. ಮತ್ತು ಕೆಂಪಡಿಕೆ ಕೆ.ಜಿ.ಗೆ 420 ರೂ.ಗೆ ಹೆಚ್ಚಿಸುವಂತೆ ಮನವಿ ಮಾಡಲಾಯಿತು. ನಿಯೋಗದ
ಬೇಡಿಕೆಗೆ ಸಚಿವರು ಒಪ್ಪಿಗೆ ನೀಡಿದರು.

ನಿಯೋಗದಲ್ಲಿ ಮಂಜಪ್ಪ ಹೊಸಬಾಳೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಹೆಚ್. ಎಮ್. ಕೃಷ್ಣಕುಮಾರ್, ಅಡಿಕೆ ಮಹಾಮಂಡಳದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ಅಖಿಲ ಭಾರತ ಸಹಕಾರ ಭಾರತೀಯ ಸಂರಕ್ಷಕ್ ಸುರೇಶ್ ವೈದ್ಯ, ತುಮ್ಕೋಸ್ ಅಧ್ಯಕ್ಷ ಆರ್.ಎಮ್.ರವಿ, ಕ್ಯಾಂಪ್ಕೊ ನಿರ್ದೇಶಕ ಮತ್ತು ಸಹಕಾರ ಭಾರತಿಯ ರಾಜ್ಯ ಕಾರ್ಯದರ್ಶಿ ಕೃಷ್ಣಪ್ರಸಾದ ಮಡ್ತಿಲ, ಟಿಎಸ್‌ಎಸ್‌ನ ನಿರ್ದೇಶಕ ಶಶಾಂಕ್ ಎಸ್. ಹೆಗಡೆ ಹಾಗೂ ಮಹಾಮಂಡಳದ ನಿರ್ದೇಶಕ ಶಿವಕುಮಾರ್ ಅವರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!