SHOCKING | ದುಡ್ಡಿಗಾಗಿ 80ರ ವೃದ್ಧೆ ಮೇಲೆ ಅತ್ಯಾಚಾರ ಕೊಲೆ ಮಾಡಿದ ನೀಚ ಕಾಮುಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

80ರ ವೃದ್ಧೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ದಿನವೂ ಹಳ್ಳಯಿಂದ ಸಿಟಿಗೆ ಬಂದು ದೇವಾಲಯಕ್ಕೆ ಹೋಗುತ್ತಿದ್ದ ಅಜ್ಜಿ ಮೇಲೆ ಕಾಮುಕ ಅತ್ಯಾಚಾರ ಎಸಗಿದ್ದಾನೆ. ಅಜ್ಜಿ ಬಳಿ ಇದ್ದ ಹಣ ಹಾಗೂ ಒಡವೆಗಳನ್ನು ಕದ್ದು ಪರಾರಿಯಾಗಿದ್ದಾನೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣ ಪೈಶಾಚಿಕ ಕೃತ್ಯಗೆ ಸಾಕ್ಷಿಯಾಗಿದೆ. ಸೋಮವಾರ ಸಂಜೆ ಶ್ರೀನಿವಾಸಪುರ ಪಟ್ಟಣದ ಮುಳಬಾಗಿಲು ರಸ್ತೆಯ ಸಂತೆ ಮೈದಾನದ ಬಳಿಯ ಗ್ಯಾರೇಜ್ ಬಳಿ ವೃದ್ದೆ ಯೊಬ್ಬಳ ಶವ ಪತ್ತೆಯಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಶ್ರೀನಿವಾಸಪುರ ಪೊಲೀಸರು ಪರಿಶೀಲನೆ ನಡೆಸಿದ ವೇಳೆ ವೃದ್ದೆಯನ್ನು ಯಾರ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ವಿಷಯ ಮೇಲ್ನೋಟಕ್ಕೆ ತಿಳಿದು ಬಂದಿತ್ತು.

ಇನ್ನು ಕೊಲೆಯಾದ ಮಹಿಳೆ ಯಾರೆಂದು ನೋಡಲಾಗಿ ಆಕೆ ಶ್ರೀನಿವಾಸಪುರ ತಾಲ್ಲೂಕು ಹೆಚ್​.ಜಿ.ಹೊಸೂರು ಗ್ರಾಮದ ಲಕ್ಷ್ಮೀದೇವಮ್ಮ(80) ಅನ್ನೋದು ತಿಳಿದು ಬಂದಿದೆ. ಲಕ್ಷ್ಮೀದೇವಮ್ಮ ಶನಿವಾರ ಶ್ರೀನಿವಾಸಪುರದಲ್ಲಿನ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು.

ಎರಡು ದಿನ ಶ್ರೀನಿವಾಸಪುರದಲ್ಲೇ ಇದ್ದು, ಸೋಮವಾರ ಸಂಜೆ ಹೆಚ್​.ಜಿ.ಹೊಸೂರು ಗ್ರಾಮಕ್ಕೆ ವಾಪಸ್ಸಾಗಲು ಬಸ್​ಗಾಗಿ ಕಾದು ಕುಳಿತಿದ್ದ ವೇಳೆ ಬಂದ ವ್ಯಕ್ತಿಯೊಬ್ಬ ಆಕೆಯನ್ನು ಹೊತ್ತೂಯ್ದು ಮೃಗದಂತೆ ವರ್ತಿಸಿ ಅತ್ಯಾಚಾರ ಮಾಡಿ ನಂತರ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆಕೆಯ ಬ್ಯಾಗ್​ನಲ್ಲಿದ್ದ ಹದಿನೈದು ಸಾವಿರ ರೂ ಹಣ ದೋಚಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಬಂದಿದ್ದ ಪೊಲೀಸರು ಅಲ್ಲೇ ಇದ್ದ ಅಂಗಡಿಯೊಂದರ ಸಿಸಿಟಿವಿ ಪರಿಶೀಲನೆ ಮಾಡಿದ್ದು, ದುರುಳನ ಕೃತ್ಯ ಬಯಲಾಗಿದೆ.

ಇನ್ನು ಸ್ಥಳಕ್ಕೆ ಬಂದಿದ್ದ ಶ್ರೀನಿವಾಸಪುರ ಪೊಲೀಸರು ಅಂಗಡಿಯಲ್ಲಿದ್ದ ಸಿಸಿಟಿವಿ ವಿಡಿಯೋ ಆಧಾರದ ಮೇಲೆ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ವೇಳೆಯಲ್ಲಿ ಆರೋಪಿ ಕೊಲೆ ಮಾಡಿ ಸ್ವಲ್ಪ ಹೊತ್ತು ಬಿಟ್ಟು ಅಲ್ಲೇನಾಗಿದೆ ಎಂದು ನೋಡಲು ವಾಪಸ್​ ಬಂದಿದ್ದ ಎನ್ನಲಾಗಿದೆ. ಈ ವೇಳೆ ಕಾರ್ಯ ಪ್ರವೃತ್ತರಾದ ಪೊಲೀಸರು ಆರೋಪಿ ಗಫರ್​ಖಾನ್ ಮೊಹಲ್ಲಾದ ಮುನ್ನಿಸಾಬ್​ ಎಂಬುವರ ಮಗ ಬಾಬ ಜಾನ್ ಅನ್ನೋದು ತಿಳಿದು ಬಂದಿದೆ. ಸದ್ಯ ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಈ ವೇಳೆ ಆರೋಪಿ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ಬಳಿಕ ಹದಿನೈದು ಸಾವಿರ ರೂ ಹಣವನ್ನು ದೋಚಿರುವುದಾಗಿ ಒಪ್ಪಿಕೊಂಡಿದ್ದಾನೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!