Tuesday, March 21, 2023

Latest Posts

ಮದುವೆಗೆ ನಿರಾಕರಿಸಿದ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಂದ ಭಗ್ನ ಪ್ರೇಮಿ!

ಹೊಸದಿಗಂತ ವರದಿ, ಬೀದರ್:

ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣ ಬೀದರ್ ತಾಲೂಕಿನ ಸೊಲಪುರ್ ಗ್ರಾಮದ ಕೆರೆ ಬಳಿ ನಡೆದಿದೆ.

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದ ಶೀವಲೀಲಾ (೧೮) ಕೊಲೆಯಾದ ದುರ್ದೈವಿ. ತಾಲೂಕಿನ ಮಲಿಕ್ ಮಿರ್ಜಾಪುರ ಗ್ರಾಮದ ನಿವಾಸಿಯಾಗಿದ್ದ ಶಿವಲೀಲಾ ತಾಯಿ ಜೊತೆ ಬೀದರ್ ನಗರದ ಮಂಗಲಪೇಟ್ ಬಳಿ ವಾಸವಾಗಿದ್ದಳು. ತಾಲೂಕಿನ ಜಾಂಬೋಳ ಗ್ರಾಮದ ಶ್ರೀನಿವಾಸ ಆರೋಪಿ ಬೈಕ್ ಮೇಲೆ ಶಿವಲೀಲಾಳನ್ನು ಕೆರೆಯ ಬಳಿ ಕರೆದುಕೊಂಡು ಹೋಗಿ ಮದುವೆಯಾಗುವಂತೆ ಒತ್ತಾಯಿಸಿದ ಇದಕ್ಕೆ ನಿರಾಕರಿಸಿದ್ದಕ್ಕೆ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು. ಈ ಕುರಿತು ಬೀದರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!