February 18, 2026
Wednesday, February 18, 2026
spot_img

ಹೊಲದಲ್ಲಿ ಬಿಟ್ಟು ಹೋದ ಕಂದಮ್ಮನ ಕಾಲಿನ ಹೆಬ್ಬೆರಳು ಕಚ್ಚಿ ತಿಂದ ನಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೃಷಿ ಜಮೀನಿನಲ್ಲಿ ಅನಾಥವಾಗಿ ಬಿಟ್ಟುಹೋಗಿದ್ದ ನವಜಾತ ಶಿಶುವಿಗೆ ನಾಯಿ ಕಚ್ಚಿದ ಘಟನೆ ಧಾರವಾಡ ಜಿಲ್ಲೆಯ ಬೈಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ.

ಗಾಯಗೊಂಡ ಶಿಶುವನ್ನು ತಕ್ಷಣ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಧಾರವಾಡ ನಗರದಿಂದ ಸುಮಾರು 30 ಕಿಲೋಮೀಟರ್ ದೂರದ ಬೈಹಟ್ಟಿ ಗ್ರಾಮದ ಹೊಲದಲ್ಲಿ ಸೋಮವಾರ ಬೆಳಗಿನ ಜಾವ ಮಗು ಜೋರಾಗಿ ಅಳುತ್ತಿರುವ ಶಬ್ದ ಕೇಳಿ ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಪರಿಶೀಲನೆ ನಡೆಸಿದಾಗ, ನಾಯಿ ಶಿಶುವಿನ ಮೇಲೆ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ತಕ್ಷಣ ಸ್ಥಳೀಯರು ಧಾವಿಸಿ ಆಶಾ ಕಾರ್ಯಕರ್ತರ ಸಹಾಯದಿಂದ ಮಗುವನ್ನು ರಕ್ಷಿಸಿದ್ದಾರೆ.

ದಾಳಿಯಲ್ಲಿ ಮಗುವಿನ ಎಡಗಾಲಿನ ಹೆಬ್ಬೆರಳು ತೀವ್ರವಾಗಿ ಗಾಯಗೊಂಡಿದ್ದು, ನಾಯಿ ಸಂಪೂರ್ಣವಾಗಿ ಕಚ್ಚಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಶುವನ್ನು ಬಿಟ್ಟುಹೋದ ತಾಯಿ ಮತ್ತು ಸಂಬಂಧಪಟ್ಟವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !