ಹೊಸದಿಗಂತ ವರದಿ,ಮಡಿಕೇರಿ:
ಗಾಳಿ, ಮಳೆ ಇಲ್ಲದೆ ಬೃಹತ್ ಗಾತ್ರದ ಮರವೊಂದು ಬಿದ್ದು ದೇಗುಲಕ್ಕೆ ಹಾನಿಯಾಗಿರುವ ಘಟನೆ ವೀರಾಜಪೇಟೆಯ ಅರಮೇರಿ ಗ್ರಾಮದಲ್ಲಿ ನಡೆದಿದೆ.
ಗಾಳಿ, ಮಳೆಯ ವಾತಾವರಣ ಇಲ್ಲದಿದ್ದರೂ ಇದ್ದಕ್ಕಿದ್ದ ಹಾಗೆ ಬೆಳಗ್ಗೆ 10 ಗಂಟೆ ಸುಮಾರಿಗೆ ಶ್ರೀ ಪನ್ನಂಗಾಲತಮ್ಮೆ ದೇವಾಲಯದ ಮೇಲೆ ಮರ ಬಿದ್ದಿದ್ದು, ಪರಿಣಾಮವಾಗಿ ದೇವಾಲಯ ಸಂಪೂರ್ಣವಾಗಿ ಹಾನಿಗೀಡಾಗಿದೆ.
ದೇವಾಲಯದ ಆವರಣದಲ್ಲಿ ಸ್ಥಳೀಯ ಇಬ್ಬರು ಕುಳಿತು ಉಭಯಕುಶಲೋಪರಿಯಲ್ಲಿ ತೊಡಗಿದ್ದಾಗಲೇ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ದೇವಾಲಯದಲ್ಲಿ ಇತ್ತೀಚೆಗಷ್ಟೇ ವಾರ್ಷಿಕ ಉತ್ಸವ ನಡೆದಿತ್ತು.