ಹೊಸದಿಗಂತ ವರದಿ ಅಂಕೋಲಾ:
ರೈತಾಬಿ ಕೆಲಸಕ್ಕೆ ಹೋದ ವ್ಯಕ್ತಿ ಕಾಲು ಜಾರಿ ಹಳ್ಳದ ನೀರಿನಲ್ಲಿ ಬಿದ್ದು ಮೃತ ಪಟ್ಟ ಘಟನೆ ತಾಲೂಕಿನ ಬೊಗ್ರಿಬೈಲ್ ನಲ್ಲಿ ಸಂಭವಿಸಿದೆ.
ತಾಲೂಕಿನ ಬಾಳೇಗುಳಿ ನಿವಾಸಿ ಸುನೀಲ ಶಂಕರ ಗೌಡ (35) ಮೃತ ವ್ಯಕ್ತಿಯಾಗಿದ್ದು ಈತ ಬೊಗ್ರಿಬೈಲ್ ನಲ್ಲಿ ಇರುವ ಗೇಣಿ ಗದ್ದೆಯಲ್ಲಿ ನಾಟಿ ಕೆಲಸ ಮುಗಿಸಿ ಕಾಲು ದಾರಿಯಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಬಿದ್ದ ಸ್ಥಳದಿಂದ 50 ಮೀಟರ್ ದೂರದಲ್ಲಿ ಮೃತ ದೇಹ ಪತ್ತೆಯಾಗಿದ್ದು ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.