ತುತ್ತಿನ ಚೀಲ ತುಂಬಿಸಿಕೊಳ್ಳಲು ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಂದಕಕ್ಕೆ ಬಿದ್ದು ಕಾಡಾನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ನಡೆದಿದೆ. ಸುಮಾರು 40 ವರ್ಷದ ಗಂಡು ಆನೆ ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.

ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಆನೆ ಕಂದಕಗಳನ್ನು ನಿರ್ಮಿಸಲಾಗಿತ್ತು. ಆಹಾರ ಅರಸಿ ಬರುತ್ತಿದ್ದ ವೇಳೆ ಕಂದಕಕ್ಕೆ ಬಿದ್ದಿದೆ. ಕಾಡಿನಿಂದ ನಾಡಿನತ್ತ ಬರುವ ಯತ್ನ ಮಾಡಿರುವ ಆನೆ ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!