ಹಾವು ಕಡಿದು ನಾಲ್ಕು ತಿಂಗಳ ಗರ್ಭಿಣಿ ಸಾವು

ಹೊಸದಿಗಂತ ವರದಿ ವಿಜಯಪುರ:

ಹಾವು ಕಡಿದು ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ಇಲ್ಲಿನ ನಿರ್ಮಲಾ ಯಲ್ಲಪ್ಪ ಚಲವಾದಿ (25) ಸಾವಿಗೀಡಾದ ನಾಲ್ಕು ತಿಂಗಳ ಗರ್ಭಿಣಿ.

ನಿರ್ಮಲಾ ಅವರು ಮನೆಯಲ್ಲಿ ಮಲಗಿರುವಾಗ, ಹಾವು ಕಚ್ಚಿದ್ದು, ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!