ಹಳಿ ತಪ್ಪಿದ ರೈಲು: ವಿಶಾಖ-ವಿಜಯವಾಡ ಮಾರ್ಗದಲ್ಲಿ ಸಂಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಶಾಖಪಟ್ಟಣಂ ಬಳಿಯ ತಡಿ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿತಪ್ಪಿದೆ. ಐದು ಬೋಗಿಗಳು ಹಳಿ ತಪ್ಪಿದ್ದರಿಂದ ಟ್ರ್ಯಾಕ್ ಹಾನಿಯಾಗಿದೆ. ಇದರಿಂದಾಗಿ ವಿಶಾಖ-ವಿಜಯವಾಡ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ.

ಹಲವು ರೈಲುಗಳು ರದ್ದಾಗಿದ್ದರೆ, ವಂದೇ ಭಾರತ್ ರೈಲು ಮೂರು ಗಂಟೆ ತಡವಾಗಿ ಓಡಲಿದೆ. ಕೂಡಲೇ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ತೆರಳಿ  ಹಳಿ ಸರಿಪಡಿಸುವ ಕಾರ್ಯದಲ್ಲಿ ನಿರತರಾದರು.

ಈ ಬಗ್ಗೆ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!