ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರಾಣಸಿಯ ಜ್ಞಾನವಾಪಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಇಲಾಖೆ ನಡೆಸಿದ್ದ ಸರ್ವೆ ವರದಿ ಬಹಿರಂಗವಾಗಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ದೊಡ್ಡ ಪ್ರಮಾಣದ ಹಿಂದೂ ದೇವಾಲಯದ ರಚನೆಯ ಅಸ್ತಿತ್ವವನ್ನು ಬಲವಾಗಿ ಸೂಚಿಸಿದೆ ಎಂದು ಈ ಕೇಸ್ನಲ್ಲಿ ಹಿಂದು ಪರ ವಾದ ಮಂಡಿಸಿರುವ ವಕೀಲ ವಿಷ್ಣು ಶಂಕರ್ ಜೈನ್ ಗುರುವಾರ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೈನ್, ಎಎಸ್ಐ ಸಮೀಕ್ಷೆಯು, ಈಗಿರುವ ರಚನೆಗಿಂತ ದೊಡ್ಡ ಪ್ರಮಾಣದ ಹಿಂದು ದೇವಾಲಯ ಅಲ್ಲಿತ್ತು ಎನ್ನುವುದನ್ನು ಸೂಚಿಸಿದೆ ಎಂದು ಹೇಳಿದ್ದಾರೆ.
ಮಸೀದಿ ನಿರ್ಮಾಣಕ್ಕೂ ಮುನ್ನ ಮಂದಿರ ಇತ್ತು. ಚಿಕ್ಕ ಮಂದಿರವಲ್ಲ. ಅಲ್ಲಿ ದೊಡ್ಡ ಭವ್ಯ ಮಂದಿರ ನಿರ್ಮಾಣವಾಗಿತ್ತು. ಹಿಂದಿನ ಕಟ್ಟಡದ ಮೇಲೆ ಮಸೀದಿ ನಿರ್ಮಾಣ ಮಾಡಲಾಗಿದೆ. ಮಸೀದಿ ಪಶ್ಚಿಮ ಗೋಡೆ ಹಿಂದೆ ನಿರ್ಮಾಣ ಮಾಡಿದ್ದ ಹಿಂದು ದೇವಾಲಯದ್ದಾಗಿದೆ. 17ನೇ ಶತಮಾನದಲ್ಲಿ ಈ ಮಂದಿರವನ್ನು ನಾಶ ಮಾಡಲಾಗಿದೆ. 32 ಹಿಂದೂ ಮಂದಿರಗಳ ಶಾಸನಗಳು ಇದರಲ್ಲಿ ಪತ್ತೆಯಾಗಿದೆ. ಈ ಮಂದಿರದಲ್ಲಿರುವ ಶಾಸನಗಳು ಕನ್ನಡ, ತೆಲುಗು ಹಾಗೂ ದೇವನಗರ ಲಿಪಿಯಲ್ಲಿವೆ ಎಂದು ವರದಿ ತಿಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಎಎಸ್ ವರದಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ಸಮೀಕ್ಷೆಯನ್ನು ಸಹ ಒಳಗೊಂಡಿದೆ. ಆ ಮೂಲಕ ಪ್ರದೇಶದಲ್ಲಿ ಐತಿಹಾಸಿಕ ಪದರಗಳ ಬಗ್ಗೆ ಇದ್ದ ಪ್ರಶ್ನೆಗಳಿಗೂ ಉತ್ತರ ಪಡೆಯಲಾಗಿದೆ. ವಿ ಪ್ರಸ್ತುತ ರಚನೆಯು ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆ ಎನ್ನುವುದು ಖಚಿತವಾಗಿ ತೋರುತ್ತಿದೆ ಎಂದಿದ್ದಾರೆ.
ಎಎಸ್ಐ ಕಂಡುಕೊಂಡಿರುವ ಸಂಶೋಧನೆಗಳು ಮಸೀದಿಗೆ ಮಾರ್ಪಾಡುಗಳನ್ನು ಮಾಡಲಾಗಿದ್ದು, ಸಣ್ಣ ಬದಲಾವಣೆಗಳೊಂದಿಗೆ ಕಂಬಗಳು ಮತ್ತು ಪ್ಲಾಸ್ಟರ್ ಅನ್ನು ಮರುಬಳಕೆ ಮಾಡಲಾಗಿದೆ ಎಂದು ಸೂಚಿಸುತ್ತದೆ. ಹಿಂದು ದೇವಾಲಯದ ಕೆಲವು ಕಂಬಗಳನ್ನು ಹೊಸ ರಚನೆಯಲ್ಲಿ ಬಳಸಲು ಸ್ವಲ್ಪ ಮಾರ್ಪಡಿಸಲಾಗಿದೆ. ಕಂಬಗಳ ಮೇಲಿನ ಕೆತ್ತನೆಗಳನ್ನು ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಎಸ್ಐ ವರದಿಯನ್ನು ಉಲ್ಲೇಖಿಸಲಾಗಿದೆ ಎಂದು ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.
ಸಮೀಕ್ಷೆಯಲ್ಲಿ 32 ಸ್ಥಳಗಳಲ್ಲಿ ಪುರಾವೆಗಳು ಸಿಕ್ಕಿವೆ. ಮಸೀದಿ ಹಿಂದೆ ಹಿಂದು ದೇವಾಲಯವಿತ್ತು ಎಂದು ತೋರಿಸುತ್ತದೆ. 2 ಸೆಪ್ಟೆಂಬರ್ 1669 ರಂದು ದೇವಾಲಯವನ್ನು ಕೆಡವಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜನಾರ್ದನ, ರುದ್ರ ಮತ್ತು ವಿಶ್ವೇಶ್ವರನ ಬಗ್ಗೆ ಶಾಸನಗಳು ಕಂಡುಬಂದಿವೆ.
ದೇವನಾಗರಿ, ತೆಲುಗು, ಕನ್ನಡ ಮತ್ತು ಇತರ ಲಿಪಿಗಳಲ್ಲಿ ಬರೆಯಲಾದ ಪ್ರಾಚೀನ ಹಿಂದೂ ದೇವಾಲಯಕ್ಕೆ ಸೇರಿದ ಶಾಸನಗಳನ್ನು ಸಹ ಸ್ಥಳದಲ್ಲಿ ಪತ್ತೆ ಮಾಡಲಾಗಿದೆ ಎಂದು ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.
ಜ್ಞಾನವಾಪಿ ಮಸೀದಿ ಸಂಕೀರ್ಣದ ಕುರಿತು ಎಎಸ್ಐ ಸಮೀಕ್ಷೆಯ ವರದಿಯನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರಿಗೆ ನೀಡಬೇಕು ಎಂದು ವಾರಣಾಸಿ ನ್ಯಾಯಾಲಯ ತೀರ್ಪು ನೀಡಿದ ಒಂದು ದಿನದ ನಂತರ ಎಎಸ್ಈ ವರದಿ ಬಹಿರಂಗವಾಗಿದೆ.
ಕಳೆದ ವರ್ಷ, ಎಎಸ್ಐ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿತು, ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ಗುರುತಿಸುವ ಸಲುವಾಗಿ ಈ ಸಮೀಕ್ಷೆ ಮಾಡಲಾಗಿತ್ತು.
#WATCH | Varanasi, Uttar Pradesh | Advocate Vishnu Shankar Jain, representing the Hindu side, gives details on the Gyanvapi case.
He says, "The ASI has said that there existed a large Hindu Temple prior to the construction of the existing structure. This is the conclusive… pic.twitter.com/rwAV0Vi4wj
— ANI (@ANI) January 25, 2024