ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರಾಖಂಡದ ಕೇದಾರನಾಥ ಬಳಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಇಬ್ಬರು ಪೈಲಟ್ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಕೇದಾರನಾಥದಿಂದ ಸುಮಾರು 2 ಕಿಮೀ ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಈ ಘಟನೆ ನಡೆದಿದೆ.
ಆರ್ಯನ್ ಹೆಸರಿನ ಹೆಲಿಕಾಪ್ಟರ್ನಲ್ಲಿ ಯಾತ್ರಾರ್ಥಿಗಳು ಸೇರಿದಂತೆ ಆರು ಮಂದಿ ಇದ್ದರು. ಅದು ಗುಪ್ತಕಾಶಿಯಿಂದ ಹೊರಟು ಕೇದಾರನಾಥಕ್ಕೆ ಹೊರಟಿತ್ತು. 33 ಕಿ.ಮೀ ಕ್ರಮಿಸುವ ಹಾದಿಯಲ್ಲಿ ಭೀಕರ ಅವಘಡ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ