ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಲಾಡ್ಜ್ ವೊಂದರಲ್ಲಿ ತಂಗಲು ಭಿನ್ನಕೋಮಿನ ಜೋಡಿ ಬಂದಿದ್ದು, ವಿಷಯ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಬೈಂದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ಠಾಣೆಗೆ ಕರೆದೊಯ್ದಿದ್ದಾರೆ.
ಉಪ್ಪುಂದದ ಲಾಡ್ಜ್ ನಲ್ಲಿ ತಂಗಲು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಬೈಲು ನಿವಾಸಿ ಅಮಿರ್ ಅಲಿ(45) ಮತ್ತು ಉಳ್ಳಾಲ ನಿವಾಸಿ 28 ವರ್ಷದ ಹಿಂದು ಯುವತಿ ಜೊತೆ ಆಗಮಿಸಿದ್ದ ಎನ್ನಲಾಗಿದೆ.
ಅಮೀರ್ ಅಲಿ ಗುಜರಿ ವ್ಯಾಪಾರಿಯಾಗಿದ್ದು, ದ.ಕ ಜಿಲ್ಲೆಯ ತೊಕ್ಕೊಟ್ಟುವಿನಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿರುತ್ತಾನೆ. ಯುವತಿ ಆತನದೇ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಳು.
ಬೈಂದೂರು ಠಾಣೆಯವರು ಯುವತಿಯ ಮನೆಯವರಿಗೆ ವಿಷಯ ತಿಳಿಸಿದ್ದು, ಅವರು ಠಾಣೆಗೆ ಆಗಮಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ