ಅಪ್ಪಾಜಿ ಬಳಿಕ ಅಪ್ಪುಗೆ ಕರ್ನಾಟಕ ರತ್ನ: ಹೆಮ್ಮೆಯ ವಿಷಯ ಎಂದ ಶಿವರಾಜ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಪ್ಪಾಜಿ ಬಳಿಕ ‘ಅಪ್ಪು’ಗೆ ಕರ್ನಾಟಕ ರತ್ನ ಪ್ರಶಸ್ತಿ ಸಿಕ್ಕಿದೆ, ಇಡೀ ಕುಟುಂಬಕ್ಕೆ ಹೆಮ್ಮೆಯ ವಿಷಯ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.

ಇಂದು ಬೆಂಗಳೂರಿನ ವಿಧಾನಸೌಧದ ಎದುರು ನಡೆದ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಮಾತನಾಡಿದ ಶಿವರಾಜ್ ಕುಮಾರ್, ನಮ್ಮ ಕುಟುಂಬದಲ್ಲಿ ಅಪ್ಪಾಜಿ ಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿತ್ತು, ಇದಾದ ಬಳಿಕ ತಮ್ಮ ಪುನೀತ್ ರಾಜ್ ಕುಮಾರ್ ಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಇದು ಇಡೀ ಕುಟುಂಬಕ್ಕೆ ಹೆಮ್ಮೆಯ ವಿಷಯ, ಸರ್ಕಾರಕ್ಕೆ , ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಹೇಳಿದರು.

ರಜನಿ ಅಂಕಲ್ ಹಾಗೂ ಜ್ಯೂ ಎನ್ ಟಿ ಆರ್ ಬಂದಿದ್ದು ಹೆಮ್ಮೆಯ ವಿಷಯ, ಎಲ್ಲರಿಗೂ ಚಿರರುಣಿಯಾಗಿರುವೆ ಎಂದು ಶಿವರಾಜ್ ಕುಮಾರ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!