ಹೈದರಾಬಾದ್‌ನಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಚಿನ್ನದ ಅಂಗಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನ ಬೇಗಂಬಜಾರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಚಿನ್ನದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂರನೇ ಮಹಡಿವರೆಗೂ ಬೆಂಕಿ ತೀವ್ರವಾಗಿ ವ್ಯಾಪಿಸಿದೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಚಿನ್ನದ ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಕರಗಿಹೋಗಿದೆ.

ಮೂರು ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಮತ್ತೊಂದೆಡೆ ಪೆದ್ದಪಲ್ಲಿ ಜಿಲ್ಲೆಯ ಅಪ್ಪಣ್ಣಪೇಟೆಯ ಎಸ್‌ಆರ್‌ಆರ್‌ ಫೈರ್‌ ವರ್ಕ್ಸ್‌ನ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸಿಡಿದು ಅಪ್ಪಣ್ಣಪೇಟೆಯಲ್ಲಿ ಅಗ್ನಿ ಅವಘಡ ಉಂಟಾಗಿದೆ.

ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿಗೆ ಸಾಧ್ಯವಾಗುತ್ತಿಲ್ಲ. ರಾಕೆಟ್, ಬಾಂಬ್ ಗಳು ಹಾರಿ ಮನೆಗಳ ಮೇಲೆ ಬೀಳುವ ಹಾಗೂ ಪಟಾಕಿಗಳ ಸದ್ದಿನಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!