ಹೊಸದಿಗಂತ ಚಿಕ್ಕಮಗಳೂರು :
ಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ಉರುಳಿಬಿದ್ದ ಪರಿಣಾಮ ಪ್ರವಾಸಿಗರ ಕಾರೊಂದು ಅಪ್ಪಚ್ಚಿಯಾಗಿದೆ. ಕಾರಿನಲ್ಲಿ ಯಾರೂ ಇಲ್ಲದ ಕಾರಣ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತರೀಕೆರೆ ತಾಲ್ಲೂಕಿನ ಕಲ್ಲತ್ತಿಗಿರಿ ಫಾಲ್ಸ್ ಬಳಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಕಾರನ್ನು ಪಾರ್ಕ್ ಮಾಡಿ ಅದರಲ್ಲಿದ್ದವರೆಲ್ಲ ಫಾಲ್ಸ್ ನೋಡಲು ಹೋಗಿದ್ದಾಗ. ಪಕ್ಕದಲ್ಲೇ ಇದ್ದ ಬೃಹತ್ ಮರ ಉರುಳಿಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.