ಅಡುಗೆ ಮಾಡುವ ವಿಚಾರಕ್ಕೆ ಶುರುವಾದ ಪತಿ-ಪತ್ನಿಯ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಡುಗೆ ಮಾಡುವ ವಿಚಾರಕ್ಕೆ ದಂಪತಿ ನಡುವೆ ನಡೆದ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ ನಡೆದಿದೆ.

ತಿಮ್ಮಮ್ಮ (65) ಮೃತ ಮಹಿಳೆ. ಪತಿ ರಂಗಯ್ಯ (75) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕಾಯಿ ತುರಿಯುವ ಮಣೆಯಿಂದ ಹೊಡೆದು ಪತ್ನಿ ತಿಮ್ಮಮ್ಮಳನ್ನು ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಪತ್ನಿ ಹತ್ಯೆ ಮಾಡಿದ ನಂತರ ತಿರುಪತಿಗೆ ಎಸ್ಕೇಪ್ ಆಗಲು ರಂಗಯ್ಯ ಮುಂದಾಗಿದ್ದ, ಆದರೆ ತಕ್ಷಣವೇ ಮಾಹಿತಿ ಪಡೆದ ಪೊಲೀಸರು ರಾಮನಗರದಲ್ಲಿ ರಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!