ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫಜಲಪುರ ತಾಲೂಕಿನ ನೀರಾವರಿ ಕಚೇರಿ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿಯಾಗಿ ಜೀಪ್ನಲ್ಲಿದ್ದ ಸಂತೋಶ್, ಶಂಕರ್, ಸಿದ್ದಮ್ಮ ಹಾಗೂ ಬಾಲಕ ಹುಚ್ಚಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಫಜಲಪುರದ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ ಜೀಪ್ ಕಲಬುರಗಿ ಕಡೆಗೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದು ಜೀಪ್ನಲ್ಲಿದ್ದವರು ಮೃತಪಟ್ಟಿದ್ದಾರೆ.
ಪೂಜಾ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.