ಎದೆಗೆ ಗುಂಡು ಹಾರಿಸಿಕೊಂಡು ಕೊಡಗಿನ ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ವರದಿ ಮಡಿಕೇರಿ:

ಕೊಡಗು ಮೂಲದ ವಿದ್ಯಾರ್ಥಿಯೊಬ್ಬ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಭವಾನಿನಗರದಲ್ಲಿ ನಡೆದಿದೆ.

ಮೃತನನ್ನು ವಿಶು ಉತ್ತಪ್ಪ (19) ಎಂದು ಗುರುತಿಸಲಾಗಿದೆ. ಕೊಡಗು ಮೂಲದ ತಮ್ಮಯ್ಯ ಎಂಬವರು ನೈಸ್​ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ‌ ಕೆಲಸ ಮಾಡುತ್ತಿದ್ದು, , ಕಳೆದ 15 ವರ್ಷಗಳಿಂದ‌ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಭವಾನಿನಗರದಲ್ಲಿ ಕುಟುಂಬ ಸಹಿತ ವಾಸವಿದ್ದಾರೆ.

ಗುರುವಾರ ತಮ್ಮಯ್ಯ. ಅವರು ದಿನಸಿ ಸಾಮಾಗ್ರಿ ​ ತರಲೆಂದು ಹೊರ ಹೋಗಿದ್ದಾಗ, ವಿಶು ತನ್ನ ತಂದೆಯ ಕೋವಿಯಿಂದ ಎದೆಗೆ ಗುಂಡು ಹಾರಿಸಿಕೊಂಡು ತಂದೆಗೆ ಕರೆ ಮಾಡಿ ‘ನಾನು ಇನ್ನು ಮುಂದೆ ತಪ್ಪು ಮಾಡುವುದಿಲ್ಲ’ ಎಂದು ಹೇಳಿದ್ದಾನೆ. ಗಾಬರಿಗೊಂಡ ತಂದೆ ಮನೆಗೆ ಬಂದು ನೋಡಿದಾಗ ವಿಶು ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿರುವುದು ಗೋಚರಿಸಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದಾರಿ ಮಧ್ಯೆ ಆತ ಸಾವಿಗೀಡಾಗಿದ್ದಾನೆ. ಈತ ಪ್ರಥಮ ವರ್ಷದ ಬಿಇ ವಿದ್ಯಾರ್ಥಿ ಎನ್ನಲಾಗಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಾದನಾಯಕನಹಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!