ಮರದ ಕೊಂಬೆ ಬಿದ್ದು ಕಾರ್ಮಿಕ ಮಹಿಳೆ ಸಾವು

ಹೊಸದಿಗಂತ ವರದಿ ಮಡಿಕೇರಿ:

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮರದ ಕೊಂಬೆ ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಮಂಗಳವಾರ ಸುಂಡಿಕೊಪ್ಪ ಬಳಿ ನಡೆದಿದೆ.

ಸುಂಟಿಕೊಪ್ಪ ಸಮೀಪದ ಪನ್ಯ ಡಿ. ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕ ಬಪ್ಪಯ್ಯ ಎಂಬವರ ಪತ್ನಿ ಲಕ್ಷ್ಮಿ (46) ಎಂಬಾಕೆಯೇ ಮೃತಪಟ್ಟ ಮಹಿಳೆ. ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ದೊಡ್ಡ ಗಾತ್ರದ ಮರದ ಕೊಂಬೆ ಇವರ ತಲೆಯ ಮೇಲೆ ಬಲವಾಗಿ ಬಿದ್ದಿದೆ. ಅದರ ಹೊಡೆತಕ್ಕೆ ಗಂಭೀರವಾಗಿ ಗಾಯಗೊಂಡ ಲಕ್ಷ್ಮಿ ಅವರನ್ನು ಸುಂಟಿಕೊಪ್ಪ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಆದರೆ ಆದಾಗಲೇ ಲಕ್ಷ್ಮಿ ಅವರು ಸಾವಿಗೀಡಾಗಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತರು ಪತಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದು, ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!