ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ‌ ಸಿಲುಕಿ ಚಿರತೆ ಬಲಿ

ಹೊಸದಿಗಂತ ವರದಿ,ಶಿವಮೊಗ್ಗ:

ಚಿರತೆಯೊಂದು ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ತಾಲೂಕಿನ ಚೋರಡಿ ಸಮೀಪದ ಕೋಣೆಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಂಡುಬಂದಿದೆ.

ಕೋಣೆಹೊಸೂರು ಗ್ರಾಮದ ಕಿರು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಉರುಳು ಹಾಕಲಾಗಿತ್ತು. ಇದಕ್ಕೆ ಸಿಲುಕಿ ಚಿರತೆ ಮೃತಪಟ್ಟಿದೆ. ಸುಮಾರು 5 ರಿಂದ 6 ವರ್ಷ ಪ್ರಾಯದ ಗಂಡು ಚಿರತೆ ಪ್ರಾಣ ಕಳೆದುಕೊಂಡಿದೆ.

ಮಂಗಳವಾರ ಬೆಳಿಗ್ಗೆ ವಿಷಯ ತಿಳಿದ ಚೋರಡಿ ವಲಯ ಅರಣ್ಯಾಧಿಕಾರಿ ಕಚೇರಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ, ಕಾಡಿನಲ್ಲಿ ಶವವನ್ನು ದಹನ ಮಾಡಲಾಯಿತು.

ಈ ವೇಳೆ ಸಾಗರ ಎಸಿಎ್ ಶ್ರೀಧರ್, ವಲಯ ಅರಣ್ಯಾಕಾರಿ ಅರವಿಂದ್, ಡಿವೈಆರ್‌ಎ್ಒ ದೀಪಕ್‌ಸಿಂಗ್, ಸೋಮಶೇಖರ್, ಅಶೋಕ್, ಮುಬಾರಕ್ ಬಾಷಾ, ಗಾರ್ಡ್‌ಗಳಾದ ಬಸವರಾಜ, ಮಂಜುನಾಥ ಮಲ್ಲಾದೊರೆ, ಗ್ರಾಪಂ ಸದಸ್ಯ ಸುದರ್ಶನ ಹಾಜರಿದ್ದರು. ಚಿರತೆ ಸಾವು ಸಂಬಂಧ ಅರಣ್ಯ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!