ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೈಕ್ ನಲ್ಲಿ ತೆರಳುತ್ತಿದ್ದಂತ ದಂಪತಿಗಳು, ಮಗುವಿನ ಮೇಲೆ ಚಿರತೆಯೊಂದು ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಬೈಕ್ ನಿಂದ ಕೆಳಗೆ ಬಿದ್ದಂತ ದಂಪತಿಗಳು, ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಬಳಿಯಲ್ಲಿ ಚಿರತೆ ದಾಳಿಯಿಂದಾಗಿ ರೈತ ಮಹದೇವಸ್ವಾಮಿ, ಪತ್ನಿ, ಮಗುವಿಗೆ ಗಾಯವಾಗಿದೆ.
ಗಾಯಾಳುಗಳ್ನು ತಗಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.



