January19, 2026
Monday, January 19, 2026
spot_img

​ಶಾಂತಿಯ ಪಾಠ: ಭಾರತದ ನೆಲದಿಂದಲೇ ಪಾಕ್‌ಗೆ ತಾಲಿಬಾನ್‌ ಸಚಿವರ ‘ಉಗ್ರ ವಿರೋಧಿ’ ಸಲಹೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:


ಅಫ್ಘಾನಿಸ್ತಾನವು ಭಯೋತ್ಪಾದಕ ಗುಂಪುಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದ್ದು, ಅದೇ ಶಾಂತಿಯ ಮಾರ್ಗವನ್ನು ಪಾಕಿಸ್ತಾನ ಸಹ ಅನುಸರಿಸಬೇಕು ಎಂದು ಅಫ್ಘಾನಿಸ್ತಾನದ ತಾಲಿಬಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಅವರು ಶುಕ್ರವಾರ ಭಾರತದಿಂದಲೇ ಪಾಕ್‌ಗೆ ಸಲಹೆ ನೀಡಿದ್ದಾರೆ.


ಶುಕ್ರವಾರ ಭಾರತಕ್ಕೆ ಭೇಟಿ ನೀಡಿದ್ದ ಮುತ್ತಕಿ ಅವರು, ಹಿಂದೆ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳು ಅಫ್ಘಾನ್ ನೆಲದಿಂದ ಕಾರ್ಯನಿರ್ವಹಿಸುತ್ತಿದ್ದವು. ಆದರೆ, ತಾಲಿಬಾನ್‌ ಕಳೆದ ನಾಲ್ಕು ವರ್ಷಗಳಲ್ಲಿ ಎಲ್ಲಾ ಭಯೋತ್ಪಾದಕರನ್ನು ನಿರ್ನಾಮ ಮಾಡಿದೆ ಎಂದು ತಿಳಿಸಿದರು.


ಈ ಹಿಂದೆ ಪಾಕಿಸ್ತಾನಿ ಭಯೋತ್ಪಾದಕ ಗುಂಪುಗಳು ಅಫ್ಘಾನ್ ನೆಲವನ್ನು ಕಾರ್ಯಾಚರಣೆಗೆ ಬಳಸುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಮುತ್ತಕಿ, “ಭಯೋತ್ಪಾದಕರಲ್ಲಿ ಒಬ್ಬರೂ ಅಫ್ಘಾನಿಸ್ತಾನದಲ್ಲಿಲ್ಲ. ಒಂದು ಇಂಚು ಭೂಮಿಯೂ ಅವರ ನಿಯಂತ್ರಣದಲ್ಲಿಲ್ಲ. ನಾವು (2021 ರಲ್ಲಿ) ಕಾರ್ಯಾಚರಣೆ ನಡೆಸಿದ ನಂತರ ಅಫ್ಘಾನಿಸ್ತಾನವು ಬದಲಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.


ಗಡಿಯಾಚೆಗಿನ ಭಯೋತ್ಪಾದನೆಯ ಬಲಿಪಶುವಾಗಿರುವ ಭಾರತದ ನೆಲದಿಂದ ಪಾಕಿಸ್ತಾನಕ್ಕೆ ಸಂದೇಶ ನೀಡಿದ ಮುತ್ತಕಿ, ‘ಶಾಂತಿಗಾಗಿ ಅಫ್ಘಾನಿಸ್ತಾನ ಮಾಡಿದಂತೆ ಇತರ ದೇಶಗಳು ಸಹ ಇಂತಹ ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳಲಿ’ ಎಂದು ಕರೆ ನೀಡಿದರು.

Must Read