ಲೋಕ ಸಮರ ಗೆಲ್ಲಲು ‘ಕೈ’ ಕಲಿಗಳಿಗೆ ರಣವ್ಯೂಹದ ಪಾಠ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ಲೋಕಸಭೆ ಚುನಾವಣೆ ಲೆಕ್ಕಾಚಾರ ಜೋರಾಗತೊಡಗಿದೆ. ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಗುರಿ ಹೊಂದಿದೆ. ಈ ಕಾರಣಕ್ಕಾಗಿಯೇ ಮೋದಿ ಹಾಗೂ ಕೇಸರಿ ಪಡೆ ಚುನಾವಣಾ ಪ್ರಚಾರದ ಅಖಾಡಕ್ಕಿಳಿದಿದ್ದಾರೆ.

ಕಾಂಗ್ರೆಸ್​ ಇಂಡಿಯಾ ಮೈತ್ರಿಕೂಟ ಮಾಡಿಕೊಳ್ಳುವ ಮೂಲಕ ಸ್ಪರ್ಧೆಗೆ ಪ್ರವೇಶಿಸಿದೆ. ಈ ನಡುವೆ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ‘ಕೈ’ ಕಲಿಗಳು ರಣತಂತ್ರ ಹೆಣೆಯುತ್ತಿದ್ದಾರೆ.

ಲೋಕಸಮರ ಗೆಲ್ಲಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಸಿದ್ಧತೆ ನಡೆಸುವಂತೆ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಲಹೆ ನೀಡಿದ್ದಾರೆ.

ಅಷ್ಟೇ ಅಲ್ಲದೆ ಲೋಕಸಭಾ ಚುನಾವಣೆಗೆ ಸಿದ್ಧರಾಗಲು ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಬಾರಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದೇ ಕೈ ಪಡೆಯ ಗುರಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!