ಪ್ರಾಣಕ್ಕೆ ಸಂಚಕಾರ ತಂದ ಬುದ್ದಿಮಾತು: ಪತಿ ಕತ್ತಿಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ ಪತ್ನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿವೃತ್ತ ಡಿಜಿಪಿ ಓಂಪ್ರಕಾಶ ಅವರನ್ನು ಪತ್ನಿಯೇ ಹತ್ಯೆಗೈದಿದ್ದರು. ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದ್ದು, ವಿಜಯಪುರ ನಗರದಲ್ಲಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.

ಇಂದು ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್​ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ.

ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ ಬಿಎಲ್​​ಡಿಇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನು ಘಟನೆಗೆ ಕಾರಣ ಪತ್ನಿ ತೇಜುಗೆ ಬುದ್ದಿಮಾತು ಹೇಳಿದ್ದೇ ಅಜೀತ್ ಪ್ರಾಣಕ್ಕೆ ಸಂಚಕಾರ ತಂದಿದೆ ಎನ್ನಲಾಗಿದೆ. ಸದಾಕಾಲ ಮೊಬೈಲ್​ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದ ತೇಜುಗೆ ಚಾಟ್ ಮಾಡಬೇಡ ಎಂದು ಬುದ್ದಿ ಮಾತು ಹೇಳಿದ್ದಕ್ಕೆ ಪತಿ ಅಜೀತ್ ಮೇಲೆ ಸಿಟ್ಟಾಗಿ ಇಂತ ದುಸ್ಸಾಹಸ ಮಾಡಿದ್ದಾಳೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!