ಹಾಸನದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿ ಮೇಲೆ ಏಕಾಏಕಿ ಒಂಟಿ ಸಲಗ ದಾಳಿ

ಹೊಸದಿಗಂತ ವರದಿ ಹಾಸನ :

ಹಾಸನ ಜಿಲ್ಲೆಯಲ್ಲಿ ನಿಲ್ಲದ ಕಾಡಾನೆ-ಮಾನವನ ನಡುವಿನ ಸಂಘರ್ಷ, ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿ ಮೇಲೆ ಏಕಾಏಕಿ ಒಂಟಿಸಲಗ ದಾಳಿ ನಡೆಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೆಬ್ಬನಹಳ್ಳಿ ಗ್ರಾಮದ ರಾಜು (68) ಕಾಡಾನೆ ದಾಳಿಯಿಂದ ಗಾಯಗೊಂಡ ವ್ಯಕ್ತಿ. ವಾಯು ವಿಹಾರಕ್ಕೆ ತೆರಳಿದ್ದ ರಾಜು ಅನ್ನು ಕಾಡಾನೆ ಸೊಂಡಲಿನಿಂದ ಎತ್ತಿ ಬಿಸಾಡಿ, ತುಳಿದು ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ರಾಜು ಇದೀಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನರು ಕಿರುಚಾಡುತ್ತಿದ್ದಂತೆ ದಾಳಿ ನಡೆಸುತ್ತಿದ್ದ ಒಂಟಿಸಲಗ ಕಾಫಿ ತೋಟದೊಳಗೆ ಹೋಗಿದೆ. ಗ್ರಾಮಸ್ಥರು ಗಾಯಾಳುವನ್ನು ಕೂಡಲೇ ಸಕಲೇಶಪುರ ತಾಲ್ಲೂಕು,ಕ್ರಾಫರ್ಡ್ ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ದೌದಾಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!