ಹೊಸದಿಗಂತ ವರದಿ ವಿಜಯಪುರ:
ಮರಕ್ಕೆ ಡಿಕ್ಕಿಯಾದ ಪರಿಣಾಮ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಹತ್ತಿ ತುಂಬಿದ ಲಾರಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಚಡಚಣ- ಬರಡೋಲ ರಸ್ತೆಯಲ್ಲಿ ನಡೆದಿದೆ.
ಹತ್ತಿ ತುಂಬಿಕೊಂಡ ಲಾರಿ, ಮೈಸೂರಿಗೆ ಹೊರಟಿದ್ದ ಸಂದರ್ಭ ಈ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ 24 ಟನ್ ಹತ್ತಿ ಭಸ್ಮವಾಗಿದೆ.
ಅಲ್ಲದೇ, ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲಿನರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ