ಹೆದ್ದಾರಿಯಲ್ಲಿ ನಿಂತಿದ್ದ ಬಸ್‌ಗೆ ಲಾರಿ ಡಿಕ್ಕಿ, ನೆಮ್ಮದಿಯಾಗಿ ಮಲಗಿದ್ದ 11 ಮಂದಿ ಭೀಕರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಭರತ್‌ಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 21 ರಲ್ಲಿರುವ ಲಖನ್‌ಪುರ ಠಾಣಾ ವ್ಯಾಪ್ತಿಗೆ ಬರುವ ಹಂಟ್ರಾ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ನಿಂತಿದ್ದ ಬಸ್‌ಗೆ ಲಾರಿ ಬಂದು ಏಕಾಏಕಿ ಡಿಕ್ಕಿ ಹೊಡೆದಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್ ಭಾವನಗರದಿಂದ ಮಥುರಾ ಕಡೆಗೆ ತೆರಳುತ್ತೊತ್ತು, ಬೆಳಗಿನ ಜಾವವಾದ ಕಾರಣ ಬಸ್‌ನಲ್ಲಿ ಇದ್ದವರು ಸುಖ ನಿದ್ದೆಯಲ್ಲಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ.

ಆರು ಮಹಿಳೆಯರು ಹಾಗೂ ಐವರು ಪುರುಷರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!