ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮಾವ ಅಳಿಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಧು ಹಾಗೂ ಜವರಯ್ಯ ಮೃತರು. ಮಧು ಪತ್ನಿ ಗೀತಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಮಧು, ಪತ್ನಿ ಹಾಗೂ ಮಾವ ಹಾಸನ ಕಡೆ ಬರುತ್ತಿದ್ದರು. ಮಾರ್ಗಮಧ್ಯೆ ಕಾರ್ ಟೈಯರ್ ಪಂಕ್ಚರ್ ಆಗಿತ್ತು. ಟೈಯರ್ ಬದಲಿಸುವ ವೇಳೆ ಲಾರಿಯೊಂದು ವೇಗವಾಗಿ ಬಂದು ಕಾರಿಗೆ ಡಿಕ್ಕಿಯಾಗಿ ಪರಾರಿಯಾಗಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.