ACCIDENT | ಹೈವೇಯಲ್ಲಿ ಏಕಾಏಕಿ ಯುಟರ್ನ್‌ ಮಾಡಿದ ಲಾರಿ​, ಕಾರ್‌ ಮೇಲೆ ಟ್ರಕ್‌ ಹರಿದು 6 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಭೀಕರವಾಗಿ ಮೃತಪಟ್ಟಿದ್ದಾರೆ.

ಸವಾಯಿ ಮಾಧೋಪುರ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವನ್ನು ತೋರಿಸಿದೆ. ಲಾರಿ ಚಾಲಕ ತಲೆಮರೆಸಿಕೊಂಡಿದ್ದಾನೆ. ಘಟನೆಯಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಲಾರಿ ಹಾಗೂ ಕಾರು ಬೇರೆ ಬೇರೆ ಲೇನ್​ನಲ್ಲಿ ಚಲಿಸುತ್ತಿತ್ತು ಕಾರು ಲಾರಿ​ ಸಮಕ್ಕೆ ಬರುವ ಸಂದರ್ಭದಲ್ಲಿ ಏಕಾ ಏಕಿ ಲಾರಿ​ ಎಡಕ್ಕೆ ತಿರುಗಿ ಯೂಟರ್ನ್​ ತೆಗೆದುಕೊಳ್ಳಲು ಮುಂದಾಗಿದೆ. ಆಗ ಕಾರಿನ ಮೇಲೆ ಟ್ರಕ್​ ಹರಿದಿದ್ದು ಒಂದೇ ಕುಟುಂಬದ 6 ಮಂದಿ ಜೀವ ಕಳೆದುಕೊಂಡಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಲಾರಿಯನ್ನು ವಶಪಡಿಸಿಕೊಳ್ಳುವಷ್ಟರಲ್ಲಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರನ್ನು ಮನೀಶ್ ಶರ್ಮಾ, ಅನಿತಾ ಶರ್ಮಾ, ಸತೀಶ್ ಶರ್ಮಾ, ಪೂನಂ, ಸಂತೋಷ್ ಮತ್ತು ಕೈಲಾಶ್ ಎಂದು ಗುರುತಿಸಲಾಗಿದೆ. ಅವರು ಸಿಕರ್ ಜಿಲ್ಲೆಯಿಂದ ರಣಥಂಬೋರ್‌ನ ತ್ರಿನೇತ್ರ ಗಣೇಶ ದೇವಸ್ಥಾನಕ್ಕೆ ತೆರಳುತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!