ಬೆಂಗಳೂರಿನಲ್ಲಿ ಓವರ್ ಟ್ಯಾಂಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಓವರ್ ಟ್ಯಾಂಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ನಡೆದಿದೆ.

ಮೃತನನ್ನು ಸುರೇಶ್ (32 ) ಎಂದು ಗುರುತಿಸಲಾಗಿದೆ. ಈತ ಆಂಧ್ರ ಪ್ರದೇಶ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ತಂಗಿ ಮನೆಯಲ್ಲಿ ನೆಲೆಸಿದ್ದನು.

3 ದಿನದ ಹಿಂದೆ ಬಳ್ಳಾರಿಗೆ ಹೋಗಿ ಬರುವುದಾಗಿ ತೆರಳಿದ್ದ ಈತ ನಾಪತ್ತೆಯಾಗಿದ್ದನು. ಓವರ್ ಟ್ಯಾಂಕ್ ಮೇಲೆ ಈತನ ಚಪ್ಪಲಿ ಪತ್ತೆಯಾಗಿದ್ದು, ಬಳಿಕ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!