ಈಜಲು ತೆರಳಿದ ವ್ಯಕ್ತಿ ಕಾವೇರಿ ನದಿಯಲ್ಲಿ ಮುಳುಗಿ ಸಾವು

ಹೊಸದಿಗಂತ ವರದಿ, ಮಡಿಕೇರಿ:

ಕಾವೇರಿ ನದಿಯಲ್ಲಿ ಈಜಲು ತೆರಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಗುರುವಾರ ನಡೆದಿದೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿ ಹಿತ್ಲೆ ಹೆಬ್ಬಾಗಿಲು ಗ್ರಾಮದ ಶಿವಣ್ಣ( 50) ಎಂಬವರೇ ಸಾವಿಗೀಡಾದವರು.
ಕುಶಾಲನಗರ ಕಾವೇರಿ ನದಿಯ ಸೇತುವೆಯ ಸಮೀಪದಲ್ಲಿರುವ ಗುಂಡಿಯಲ್ಲಿ ನಿಂತ‌ ನೀರಿನಲ್ಲಿ ಈಜಲು ಹೋದ ಸಂದರ್ಭ ಘಟನೆ ನಡೆದಿದೆ.
ಕುಶಾಲನಗರ ಪಟ್ಟಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!