ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆ ಬೆಂಗಳೂರು ಕರಗ ಮಹೋತ್ಸವ ಸಂಪನ್ನವಾಗಿದೆ. ಕರಗ ನೋಡಿ ವಾಪಾಸಾಗುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಬ್ರಿಡ್ಜ್ನಿಂದ ಬಿದ್ದು ಮೃತಪಟ್ಟಿದ್ದಾರೆ.
ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆನಂದ್ ರಾವ್ ಸರ್ಕಲ್ನ ಫ್ಲೈ ಓವರ್ನಿಂದ ಬಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ.
ಈವರೆಗೂ ಮೃತರ ಗುರುತು ಪತ್ತೆಯಾಗಿಲ್ಲ. ಮೂರು ದಿನಗಳ ನಡೆಯುವ ಕರಗ ಉತ್ಸವವನ್ನು ನೋಡಲು ಇವರು ಬಂದಿದ್ದರು. ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಯಾರಾದರೂ ತಳ್ಳಿದ್ದಾರಾ ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.