ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹುಣಸೂರು ಮೂಲದ ಮಹೇಶ್ (35) ಮೃತ ದುರ್ದೈವಿ. ಸ್ನೇಹಿತನ ಮನೆಯ ಗೃಹ ಪ್ರವೇಶಕ್ಕೆಂದು ಮಹೇಶ್ ಬಂದಿದ್ದರು. ಸ್ನೇಹಿತರ ಜೊತೆ ಸ್ನಾನಕ್ಕೆಂದು ನದಿಗೆ ಈಜಲು ಹೋಗಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿ ಮಹೇಶ್ ಸಾವನ್ನಪ್ಪಿದ್ದಾರೆ.
ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.