ಹೊಸದಿಗಂತ ವರದಿ ಮಡಿಕೇರಿ:
ಕಾಫಿ ತೋಟದ ಲೈನ್ ಮನೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದ ಕಾಫಿ ತೋಟವೊಂದರಲ್ಲಿ ಕಾಫಿ ಕೊಯ್ಯುವ ಕೆಲಸಕ್ಕಾಗಿ ಕಾರ್ಮಿಕರೊಬ್ಬರು ನೇಮಕಗೊಂಡಿದ್ದರೆನ್ನಲಾಗಿದ್ದು, ಇದೀಗ ಲೈನ್ಮನೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವದ ವಾರಸುದಾರರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.