ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೈಕ್ ಮೆಕಾನಿಕ್ ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದು, ಲಾಟರಿಯಲ್ಲಿ 25 ಕೋಟಿ ರೂ.ಬಹುಮಾನ ಪಡೆದಿದ್ದಾರೆ.
ಹೌದು, ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣ ನಿವಾಸಿಯಾದ ಅಲ್ತಾಫ್ ಪಾಷಾ, ಕೇರಳ ರಾಜ್ಯದ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದಬೀಗಿದ್ದಾರೆ. ವೃತ್ತಿಯಲ್ಲಿ ಬೈಕ್ ಮೆಕಾನಿಕ್ ಆಗಿರುವ ಅಲ್ತಾಫ್, ಇತ್ತೀಚೆಗಷ್ಟೆ ಕೇರಳಕ್ಕೆ ಹೋಗಿದ್ದಾಗ 500 ರೂ ಕೊಟ್ಟು ಲಾಟರಿ ಖರೀದಿ ಮಾಡಿದ್ದರು. ಇದೀಗ ಕೋಟಿ ಗೆದ್ದಿದ್ದಾರೆ.
ಇನ್ನು ಬಹುಮಾನ ಬಂದಿರುವ ವಿಚಾರ ತಿಳಿಯುತ್ತಿದ್ದಂತೆ ಲಾಟರಿ ಹಣ ಪಡೆಯುವ ಪ್ರಕ್ರಿಯೆಗಾಗಿ ಅಲ್ತಾಫ್ ಕೇರಳಕ್ಕೆ ಪ್ರಯಾಣ ಬೆಳಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘25 ಕೋಟಿ ಲಾಟರಿ ಬರುತ್ತೆ ಎಂದು ಅಂದು ಕೊಂಡಿರಲಿಲ್ಲ. 15 ವರ್ಷದಿಂದ ಲಾಟರಿ ತೆಗೆದುಕೊಳ್ಳುತ್ತಿದ್ದೇನೆ. ಕರ್ನಾಟಕದಲ್ಲಿ ಲಾಟರಿ ಇದ್ದಾಗಲೂ ಲಾಟರಿಯಿಂದ ಲಾಸ್ ಮಾಡಿಕೊಂಡಿದ್ದೆ. ಕೇರಳದಲ್ಲಿ ಸ್ನೇಹಿತರು, ಸಂಬಂಧಿಕರು ಇದ್ದ ಹಿನ್ನಲೆ ಆಗಾಗ ಕೇರಳಕ್ಕೆ ಹೋಗುತ್ತಿದ್ದೆ. ಅವಾಗ ಲಾಟರಿ ತೆಗೆದುಕೊಂಡು ಬರುತ್ತಿದೆ ಎಂದಿದ್ದಾರೆ. ಇನ್ನು ಬಂದ ದುಡ್ಡಿನಲ್ಲಿ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡುತ್ತೇನೆ ಎಂದು ಹೇಳಿದ್ದಾರೆ.