ದಿಗಂತ ವರದಿ ವಿಜಯಪುರ:
ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನನ್ನು ವ್ಯಕ್ತಿಯೊಬ್ಬ ಹತ್ಯೆಮಾಡಿರುವ ಘಟನೆ ವಿಜಯಪುರ ನಗರದ ಜಾಮೀಯಾ ಮಸೀದಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಫಾರಿದ್ ಹೊನವಾಡ (15) ಮೃತಪಟ್ಟ ಬಾಲಕ. ಫಾರಿದ್ ಹೊನವಾಡ ಹಾಗೂ ರಾಹುಲ್ ಬೆಳ್ಳುಬ್ಬಿ ಇಬ್ಬರ ಮಧ್ಯ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಈ ವೇಳೆ ರಾಹುಲ್ ಫಾರಿದ್ ಮೇಲೆ ಹಲ್ಲೆಗೈದು ಹತ್ಯೆ ಮಾಡಿದ್ದೇನೆ.
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.