ಹನುಮ ಮಾಲೆ ಧರಿಸಿ ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ವ್ಯಕ್ತಿ!

ಹೊಸದಿಗಂತ ವರದಿ, ವಿಜಯಪುರ

ಪ್ರಸ್ತುತ ರಾಜ್ಯ, ದೇಶಾದ್ಯಂತ ಹಿಜಾಬ್ ಸೇರಿದಂತೆ ಹಲವು ವಿವಾದಗಳ ಮಧ್ಯೆಯೂ ಇಲ್ಲೊಬ್ಬ ಮುಸ್ಲಿಂ ವ್ಯಕ್ತಿ ಹನುಮ ಮಾಲೆಯನ್ನು ಧರಿಸಿ ಭಾವೈಕ್ಯತೆ ಸಂದೇಶ ಸಾರಿದ್ದಾರೆ.

ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ಜಾಫರ್ ಬೆಣ್ಣೆ ಎಂಬವರು ಹನುಮ ಮಾಲೆ ಧರಿಸಿದ್ದು, ಕೇಸರಿ ಬಟ್ಟೆ, ಕೊರಳಲ್ಲಿ ಮಾಲೆಯನ್ನು ಧರಿಸಿ ಹಿಂದು ಮುಸ್ಲಿಂ ಭಾವೈಕ್ಯತೆ ಮೆರೆದಿದ್ದಾರೆ.

ಮಾಲೆ ಧರಿಸಿ ಉತ್ತರ ಕರ್ನಾಟಕದ ಪ್ರಸಿದ್ಧ ದೇವಸ್ಥಾನವಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ವ್ರತವನ್ನು ಪೂರ್ಣಗೊಳಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!