July 18, 2026
Saturday, July 18, 2026
spot_img

ವಾಂಗ್ಚುಕ್ ಆಸ್ಪತ್ರೆಗೆ, ಹೋರಾಟಕ್ಕೆ ಹೊಸ ಮುಖ: ಉಪವಾಸದ ಹೊಣೆ ಹೊತ್ತ ಜಿರಳೆ ಪಾರ್ಟಿ ಸಂಸ್ಥಾಪಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ, ಪ್ರತಿಭಟನೆಗೆ ಹೊಸ ತಿರುವು ಸಿಕ್ಕಿದೆ.

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ವಾಂಗ್ಚುಕ್ ಆಸ್ಪತ್ರೆಗೆ

20 ದಿನಗಳಿಂದ ಉಪವಾಸ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಅವರನ್ನು ಆರೋಗ್ಯ ಹದಗೆಟ್ಟ ಕಾರಣ ವೈದ್ಯರ ಸಲಹೆ ಮತ್ತು ನ್ಯಾಯಾಲಯದ ನಿರ್ದೇಶನದಂತೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ:

ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಭಿಜೀತ್ ದೀಪ್ಕೆ, ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿ ಅನಿರ್ದಿಷ್ಟಾವಧಿಯ ಉಪವಾಸ ಆರಂಭಿಸಿದ್ದಾರೆ.

‘ಚಲೋ ಸಂಸದ್’ ಮೆರವಣಿಗೆ ಯಥಾಪ್ರಕಾರ

ಜುಲೈ 20ರಂದು ನಿಗದಿಯಾಗಿರುವ ‘ಚಲೋ ಸಂಸದ್’ ಮೆರವಣಿಗೆ ಯಾವುದೇ ಬದಲಾವಣೆ ಇಲ್ಲದೆ ನಡೆಯಲಿದೆ ಎಂದು ಪ್ರತಿಭಟನಾ ಸಂಘಟನೆ ಸ್ಪಷ್ಟಪಡಿಸಿದೆ.

ವಾಂಗ್ಚುಕ್ ಅವರಿಗೆ ಬೆಂಬಲವಾಗಿ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಸೇರಿದ್ದು, ಮುಂದಿನ ದಿನಗಳಲ್ಲಿ ಚಳುವಳಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !