ಹೊಸದಿಗಂತ ವರದಿ, ವಿಜಯಪುರ:
ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನೇಕಾರ ಕಾಲೋನಿಯ ಕೀರ್ತನಾ ಮಧುಕರ (21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಕೀರ್ತನಾ ಮಧುಕರ ಬಿಎಲ್ ಡಿಇ ನರ್ಸಿಂಗ್ ಕಾಲೇಜ್ ನಲ್ಲಿ ಎರಡನೇ ವರ್ಷದ ನರ್ಸಿಂಗ್ ನಲ್ಲಿ ಓದುತ್ತಿದ್ದಳು. ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ. ಇದರಿಂದ ಮನನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ