ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ‘ಶೂ’ನಿಂದ ಸಿಕ್ತು ಸುಳಿವು!

ಹೊಸದಿಗಂತ ವರದಿ ಕಡಬ: 

ಸಕಲೇಶಪುರ ಮೂಲದ ವ್ಯಕ್ತಿಯೊಬ್ಬರು ಕಡಬ ತಾಲೂಕಿನ ಕೋಡಿoಬಾಳ ಗ್ರಾಮದ ದoಡುಗುರಿ ಸಮೀಪ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 24 ರಂದು ಬೆಳಕಿಗೆ ಬಂದಿದೆ. ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಮೃತ ವ್ಯಕ್ತಿ. ಕಡಬ ಪೊಲೀಸರು, ಸ್ಥಳೀಯರು ಹಾಗೂ ಶೌರ್ಯ ತಂಡದ ಸದಸ್ಯರು ನದಿಗಿಳಿದು ಕಾರ್ಯಚರಣೆ ನಡೆಸಿ ಮೃತದೇಹ ಪತ್ತೆ ಹಚ್ಚಿದ್ದಾರೆ.

ಕುಮಾರಧಾರ ನದಿ ಬಳಿ ವ್ಯಕ್ತಿಯೊಬ್ಬರ ಶೂ ಪತ್ತೆಯಾದ ಹಿನ್ನಲೆಯಲ್ಲಿ ಅನುಮಾನಗೊಂಡು ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಧರ್ಮಯ್ಯ ನವರು ಮೂಲತ: ಹಾಸನ ಜಿಲ್ಲೆಯ ಸಕಲೇಶಪುರ ಬಾಲಗದ್ದೆಯವರು. ಕಡಬದ ಕೋಡಿಂಬಾಳ ಬಳಿ ರಬ್ಬರ್‌ ಕಟ್ಟಿಂಗ್‌ ಕೆಲಸಕ್ಕೆಂದು ಬಂದಿದ್ದರು.

ಕಡಬ ಪೊಲೀಸ್‌ ಉಪ ನಿರೀಕ್ಷಕ ಆಂಜನೇಯ ರೆಡ್ಡಿ ನೇತ್ರತ್ವದಲ್ಲಿ ಕಡಬ ಠಾಣೆಯ ಪೊಲೀಸರು ಹಾಗು ಸ್ಥಳೀಯ ಶೌರ್ಯ ತಂಡದ ಮುರಳಿ,ಸೋಮಪ್ಪ, ಆನಂದ, ಅಪರ್ಣಾ, ಆಪತ್ಬಾಂದವ ತಂಡದ ಸದಸ್ಯರಾದ ರಫೀಕ್,ಮನೋಜ್, ಅನಿಲ್ ಸೇರಿದಂತೆ ಸ್ಥಳಿಯರು ಮೃತದೇಹ ಪತ್ತೆಹಚ್ಚಲು ಸಹಕರಿಸಿದರು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!