ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆ ಬಾಯಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಮಹಾದೇವ ಪುನ್ನಪ್ಪ ಖುರೆ ಎಂಬುವರು ಮೊಸಳೆ ಬಾಯಿಗೆ ಸಿಲುಕಿ, ಮೃತಪಟ್ಟಿರುವ ದುರ್ದೈವಿ. ಮೃತ ಮಹಾದೇವ ಪುನ್ನಪ್ಪ ಖುರೆಯವರಿಗೆ ಈಜಲು ಬರುತ್ತಿರಲಿಲ್ಲ. ಹೀಗಾಗಿ ನದಿ ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದರು. ಆ ವೇಳೆ ಮೊಸಳೆ ಬಾಯಿಗೆ ಸಿಲುಕಿ ಮೃತಪಟ್ಟಿದ್ದಾರೆ.