ಅಪಘಾತದಲ್ಲಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರನಿಗೆ ನೆರವಾದ ಪೊಲೀಸ್‌ ಅಧಿಕಾರಿ

ಹೊಸದಿಗಂತ ವರದಿ, ಹುಬ್ಬಳ್ಳಿ:
ದೇಶಪಾಂಡೆ ನಗರದ ಗುಜರಾತ್ ಭವನ ಹತ್ತಿರ ದ್ವಿಚಕ್ರ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಉಪನಗರ ಪೊಲೀಸ್ ಅಧಿಕಾರಿ ರವಿಚಂದ್ರನ್ ಬಿ. ಅವರು ಉಪಚರಿಸಿ ತಮ್ಮ‌ ವಾಹನದಲ್ಲಿಯೇ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.
ಅಪಘಾತಕ್ಕೀಡಾಗಿದ್ದ ದ್ವಿಚಕ್ರ ವಾಹನದ ಸವಾರ ಕೆಳಗೆ ಬಿದ್ದ ರಭಸಕ್ಕೆ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು.‌ ಈ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದ ಪೊಲೀಸ್ ಅಧಿಕಾರಿ ರವಿಚಂದ್ರನ್ ವ್ಯಕ್ತಿಯ ನೆರವಿಗೆ ಧಾವಿಸಿದ್ದಾರೆ. ಬಳಿಕ ನೀರು ಕುಡಿಸಿ ಉಪಚರಿ ಆಸ್ಪತ್ರೆಯತ್ತ ಕರೆದೊಯ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!