ವಿಜಯಪುರದಲ್ಲಿ ಖಾಸಗಿ ಬಸ್‌ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

ದಿಗಂತ ವರದಿ ವಿಜಯಪುರ:

ಖಾಸಗಿ ಬಸ್ ಹರಿದು ಪಾದಚಾರಿ ಸ್ಥಳದಲ್ಲೆ ಸಾವಿಗೀಡಾದ ಘಟನೆ ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಅಶೋಕ ಪರ್ಜೆನವರ್ (58) ಮೃತಪಟ್ಟ ವ್ಯಕ್ತಿ.

ಅಶೋಕ ಪರ್ಜೆನವರ್ ರಸ್ತೆ ದಾಟುತ್ತಿದ್ದಾಗ ಬೆಂಗಳೂರಿನಿಂದ ವಿಜಯಪುರಕ್ಕೆ ಬರ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿ, ಶೋಕನ ಮೇಲೆ ಬಸ್ ಹರಿದ ಪರಿಣಾಮ ಮೃತಪಟ್ಟಿದ್ದಾನೆ‌.

ಖಾಸಗಿ ಬಸ್‌ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!