ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಕಂದಾಯ ನಿರೀಕ್ಷಕ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಯನ್ನು ಬಂಧಿಸಲಾಗಿದೆ.
ಪಹಣಿ ಒಂದರಲ್ಲಿ ತಮ್ಮ ಹೆಸರನ್ನು ಸೇರಿಸಲು ಕಂದಾಯ ಇಲಾಖೆಯ ನಿರೀಕ್ಷಕನೊಬ್ಬ ವ್ಯಕ್ತಿಯ ಒಬ್ಬರ ಬಳಿ ನಾಲ್ಕು ಲಕ್ಷ ರೂಪಾಯಿಯ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಸಂದರ್ಭ ವ್ಯಕ್ತಿಯಿಂದ ನಾಲ್ಕು ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಕಂದಾಯ ನೀರಿಕ್ಷಕ ದಿನೇಶ್ ಎನ್ನುವ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸರ್ಕಾರಿ ಕೆಲಸಕ್ಕೆ ಕಂದಾಯ ನಿರೀಕ್ಷಕ ದಿನೇಶ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುರಿತಂತೆ ಮಂಗಳೂರು ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಕೆಯಾಗಿತ್ತು, ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್ ಪಿ ನಟರಾಜ್ ನೇತ್ರತ್ವದಲ್ಲಿ ದಾಳಿ ಮಾಡಲಾಗಿದ್ದು, 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನೀರಿಕ್ಷಕ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾನೆ.