ದಿಗಂತ ವರದಿ ಮುಂಡಗೋಡ:
ಅಪಘಾತದಲ್ಲಿ ಗಂಭೀರಗಾಯಗೊಂಡಿದ್ದ ಬೈಕ ಸವಾರನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಪಟ್ಟಣದ ಕಲಾಲ ಓಣಿಯ ಪ್ರವೀಣ ಬಂಕಾಪುರ ಎಂಬಾತನೇ ಮೃತಪಟ್ಟ ಯುವಕ. ಕಳೆದ ಬುಧವಾರ ಸಂಜೆ ತಾಲೂಕಿನ ಇಂದಿರಾನಗರ ಕೊಪ್ಪ ಗ್ರಾಮದ ಹತ್ತಿರ ಮುಂದಿನ ವಾಹನ ತಪ್ಪಿಸಲು ಹೊಗಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಬಿದ್ದು ಗಂಭೀರಗೊಂಡಿದ್ದ ಪ್ರವೀಣನನ್ನು ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಹುಬ್ಬಳಿಗೆ ಕರೆದೊಯ್ಯಲಾಗಿತ್ತು.
ಆದರೆ ಐದು ದಿನಗಳ ನಂತರ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾನೆ. ಯುವಕನ ಸಾವಿನ ಸುದ್ದಿ ತಿಳಿದು ಕುಟಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.