ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರುಶನ ನೀಡುವ ಹಾಸನಾಂಬೆ ನೋಡಲು ಮೊದಲ ದಿನವೇ ಭಕ್ತ ಸಾಗರವೇ ಹರಿದು ಬಂದಿತ್ತು. ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರುಶನ ಪಡೆದಿದ್ದಾರೆ.
ಇಂದು ಒಂದೇ ದಿನ ಒಂದು ಕೋಟಿ ರೂಪಾಯಿಗೂ ಹೆಚ್ಚು ಆದಾಯ ಹಾಸನಾಂಬೆಯ ಬೊಕ್ಕಸಕ್ಕೆ ಹರಿದುಬಂದಿದೆ.
ಇಂದು ಒಂದೇ ದಿನ ಒಂದು ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ. ವೀಕೆಂಡ್ ಹಿನ್ನೆಲೆ ಟಿಕೆಟ್ ಮಾರಾಟದಿಂದ ದಾಖಲೆ ಆದಾಯ ಸಂಗ್ರಹವಾಗಿದೆ. ಒಂದು ಸಾವಿರ ಮೌಲ್ಯದ ಟಿಕೆಟ್ ಮಾರಾಟದಿಂದ 65 ಲಕ್ಷ ರೂ. ಸಂಗ್ರಹವಾಗಿದ್ದು, 300 ರೂ. ಮೌಲ್ಯದ ಟಿಕೆಟ್ ಮಾರಾಟದಿಂದ 35 ಲಕ್ಷ ರೂ. ಆದಾಯ ಸಂಗ್ರಹವಾಗಿದೆ.
ಇನ್ನು ಆದಾಯ ಸಂಗ್ರಹದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಆರಂಭದ ದಿನಗಳಲ್ಲೇ ಹಾಸನಾಂಬೆ ದರುಶನದಲ್ಲಿ ದಾಖಲೆ ಆದಾಯ ಸಂಗ್ರಹವಾಗುತ್ತಿದೆ. ನಿನ್ನೆ 67 ಲಕ್ಷ ರೂ. ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷ 12 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಈ ವರ್ಷ 15 ಕೋಟಿಗೂ ಹೆಚ್ಚು ಆದಾಯ ಸಂಗ್ರಹ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಇದುವರೆಗೆ 91 ಸಾವಿರ ಭಕ್ತರು ದರುಶನ ಪಡೆದಿದ್ದಾರೆ. ಐದಾರು ವರ್ಷಗಳಿಗೆ ಹೋಲಿಸಿದೆ ಇದು ದಾಖಲೆ. ಯಾವುದೇ ಗೊಂದಲವಿಲ್ಲದೆ ದರುಶನ ಚೆನ್ನಾಗಿ ನಡೀತಿದೆ. ಪ್ರತಿದಿನ ಕನಿಷ್ಠ 2 ಲಕ್ಷ ಭಕ್ತರು ಬರುವ ಸಾಧ್ಯತೆಯಿದೆ. ಎಲ್ಲರೂ ಅ.18ರೊಳಗೆ ಬಂದು ದರುಶನಮಾಡಿಕೊಳ್ಳಿ. ಅ.15ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಂದು ದರುಶನ ಮಾಡುತ್ತಾರೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.