ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲಾರಿ, ಬೈಕ್, ಕಾರು, ಆಟೋ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದ ಎದುರು ನಡೆದಿದೆ.
ಮೃತರನ್ನು ಸವದತ್ತಿ ತಾಲೂಕಿನ ಕುರವಿನಕೊಪ್ಪ ಗ್ರಾಮದ ಸೋಮಲಿಂಗ ಹೂಗಾರ (33) ಹಾಗೂ ಸವದತ್ತಿ ತಾಲೂಕಿನ ಮದಿಗೇರಿ ಗ್ರಾಮದ ಕಾರ್ತಿಕ್ ಕುರುಬಗಟ್ಟಿ (9) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.
ಧಾರವಾಡದ ಸವದತ್ತಿ ಕಡೆಯಿಂದ ಬರುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಮೊದಲು ಸವದತ್ತಿ ಪಟ್ಟಣದ ಕಡೆಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಪಕ್ಕ ನಿಂತಿದ್ದ ಕಾರು ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.